ಯಲಬುರ್ಗಾ ತಾಲ್ಲೂಕಿನ ಸಮಸ್ತ ವಾಲ್ಮೀಕಿ ಸಮಾಜ ಬಾಂಧವರು ಪ್ರಸ್ತುತ ರಾಜ್ಯ ಸರ್ಕಾರ ಸುಮಾರು 56,437 ಹುದ್ದೆಗಳನ್ನ ಭರ್ತಿ ಮಾಡುವ ಪರಿಶಿಷ್ಟ ಪಂಗಡಗಳಿಗೆ 3% ಮಾತ್ರ ಮೀಸಲಾತಿ ಅನ್ವಯವಾಗುವಂತೆ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಹಾಗೂ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಮತ್ತು ಪರಿಶಿಷ್ಟ ಜಾತಿಗಳಿಗೆ 15% ರಿಂದ17% ಪರಿಶಿಷ್ಟ ಪಂಗಡಗಳಿಗೆ 3% ರಿಂದ7% ಹೆಚ್ಚಿಸಿ ಕಾಯ್ದೆಯನ್ನ ನ್ಯಾಯಾಂಗ ಪರಿಶೀಲನೆಯಿಂದ ರಕ್ಷಿಸಲು ಸಂವಿಧಾನ 9 ನೇ ಪರಿಚ್ಛೇದಕ್ಕೆ ಸೇರಿಸಲು ಜಿಲ್ಲಾ ಅಧ್ಯಕ್ಷರು ಮತ್ತು ಧರ್ಮದರ್ಶಿಗಳು ಹಿರಿಯ ನಾಯಕರು ಜಾಗೃತ ಕಾರ್ಯಕ್ರಮ ಹಮ್ಮಿಕೊಂಡಿದ್ದು ಯಲಬುರ್ಗಾ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷರಾದ ಯಲ್ಲಪ್ಪ ಹಡಗಲಿ ಸಮಾಜದ ಬಂಧುಗಳಿಗೆ ಕರೆ ನೀಡಿದರು.
ಕೊಪ್ಪಳ ಜಿಲ್ಲಾ ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕರ ವತಿಯಿಂದ ದಿನಾಂಕ 24.5.2026 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಭವನ ಮತ್ತು 10 ಘಂಟೆಗೆ ಪ್ರವಾಸಿ ಮಂದಿರ ಕೊಪ್ಪಳ ದಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿ ಮುಂದಿನ ಹೋರಾಟದ ರೂಪರೇಷೆಗಳನ್ನು ರೂಪಿಸಲು ಸಲಹೆ ಸೂಚನೆಗಳನ್ನು ಸಂಗ್ರಹಿಸಲು ಮಾಜಿ ಸಂಸದರು ವಿ. ಎಸ್. ಉಗ್ರಪ್ಪ ರವರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ ಅದಕ್ಕಾಗಿ ಈ ಸಭೆಗೆ ಸಮಾಜದ ಹಿತದೃಷ್ಟಿಯಿಂದ ಸಮಾಜದ ಬಂಧುಗಳು ಪಕ್ಷಾತೀತವಾಗಿ ಭಾಗವಹಿಸಿ ತಮ್ಮ ಅಮೂಲ್ಯವಾದ ಅಭಿಪ್ರಾಯ ಮಂಡಿಸಲು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆಂದು ಯಲ್ಲಪ್ಪ ಹಡಗಲಿ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಕಾಂತಗೌಡ ಪಾಟೀಲ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕ ಇವರು ಸಮಾಜದ ಬಂಧುಗಳು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸ ಬೇಕೆಂದು ಕರೆ ನೀಡಿದರು.
