Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಹತ್ತಿ ಬೆಳೆಯಲ್ಲಿ ನೂತನ ತಾಂತ್ರಿಕತೆ ಅಳವಡಿಸಿಕೊಳ್ಳಿ: ಡಾ. ಜಯಪ್ರಕಾಶ ಮೋಹನ ನಿಡಗುಂದಿ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ: ಹತ್ತಿ ಬೆಳೆಯಲ್ಲಿ ಉತ್ಪಾದನೆ ಹಾಗೂ ಗುಣಮಟ್ಟ ಹೆಚ್ಚಿಸಲು ರೈತರು ನೂತನ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತೀರ್ಣ ನಿರ್ದೇಶಕ ಡಾ. ಜಯಪ್ರಕಾಶ ಮೋಹನ ನಿಡಗುಂದಿ ಹೇಳಿದರು.

ಪಟ್ಟಣದ ಕಂದಾಯ ಭವನದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಹತ್ತಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಕುರಿತು ರೈತರಿಗೆ ತರಬೇತಿ ಕಾರ್ಯಗಾರ ಹಾಗೂ ಕೃಷಿ ಜಾಗೃತಿ ಅಭಿಯಾನದ “ಖೇತ್ ಬಚಾವೋ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹತ್ತಿ ಬೆಳೆ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದ್ದು, ಹವಾಮಾನ ವೈಪರೀತ್ಯ, ಕೀಟ-ರೋಗಗಳ ಬಾಧೆ ಹಾಗೂ ಉತ್ಪಾದನಾ ವೆಚ್ಚದ ಹೆಚ್ಚಳದಿಂದ ರೈತರು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವೈಜ್ಞಾನಿಕ ಕೃಷಿ ಪದ್ಧತಿ, ಸಮತೋಲನ ಗೊಬ್ಬರ ಬಳಕೆ, ಹನಿ ನೀರಾವರಿ, ಮಣ್ಣು ಪರೀಕ್ಷೆ ಹಾಗೂ ಸಮಗ್ರ ಕೀಟ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದು ತಿಳಿಸಿದರು.news_1781071123_0_139.webpಕೃಷಿ ವಿಸ್ತೀರ್ಣ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ. ಬದರಿ ಪ್ರಸಾದ ಮಾತನಾಡಿ, ರೈತರು ಕೃಷಿ ತಜ್ಞರ ಸಲಹೆಗಳನ್ನು ಪಾಲಿಸುವ ಮೂಲಕ ಬೆಳೆ ಹಾನಿಯನ್ನು ತಡೆಯಬಹುದು. ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿಕೊರಕ, ಎಲೆಚುಕ್ಕೆ ಸೇರಿದಂತೆ ವಿವಿಧ ಕೀಟ-ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ರೈತರು ನಿಯಮಿತವಾಗಿ ತಮ್ಮ ಹೊಲಗಳ ಪರಿಶೀಲನೆ ನಡೆಸಿ, ಸಮಸ್ಯೆಗಳು ಕಂಡುಬಂದ ತಕ್ಷಣ ಕೃಷಿ ಇಲಾಖೆಯನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ರೈತರಿಗೆ ಹತ್ತಿ ಬೆಳೆಯ ಸುಧಾರಿತ ತಳಿಗಳು, ಬೆಳೆ ನಿರ್ವಹಣೆ, ನೀರು ಹಾಗೂ ಗೊಬ್ಬರದ ಸಮರ್ಪಕ ಬಳಕೆ, ಬೆಳೆ ಸಂರಕ್ಷಣಾ ಕ್ರಮಗಳ ಕುರಿತು ತಜ್ಞರು ವಿವರಿಸಿದರು.

ಆಡಳಿತ ಮಂಡಳಿ ಸದಸ್ಯ ತಿಮ್ಮಣ್ಣ ಚವಡಿ ಮಾತನಾಡಿ, ಕೃಷಿ ಇಲಾಖೆಯ ಇಂತಹ ಜಾಗೃತಿ ಕಾರ್ಯಕ್ರಮಗಳು ರೈತರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಮಾಡಿಕೊಡುವ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ, ರೈತ ಮುಖಂಡರು, ರೈತ ಮಹಿಳೆಯರು ಹಾಗೂ ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು. ರೈತರು ತಜ್ಞರೊಂದಿಗೆ ಸಂವಾದ ನಡೆಸಿ ತಮ್ಮ ಬೆಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!