Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಲಿಂಗಸುಗೂರು ಕಾಂಗ್ರೆಸ್‌ಗೆ ಮುಜುಗರ ತಂದ ಘಟನೆ? ಕಿಡಿಗೇಡಿಗಳ ವರ್ತನೆಗೆ ಕ್ರಮಕ್ಕೆ ಆಗ್ರಹ

ಡಿ.ಡಿ. ನ್ಯೂಸ್ : ಲಿಂಗಸಗೂರು

Advertisement

ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ಸಂಭ್ರಮಾಚರಣೆ?

ಲಿಂಗಸಗೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರವನ್ನು ಹಿನ್ನೆಲೆಯಾಗಿ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಲಾಗುತ್ತಿರುವ ಕೆಲವರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ ಎನ್ನುವ ಆರೋಪ ಲಿಂಗಸಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಕೇಳಿಬಂದಿದ್ದು, ಸ್ಥಳೀಯ ಕಾಂಗ್ರೇಸ್ ಪಕ್ಷದಲ್ಲಿ ಅಸಮದಾನ ಮಾತುಗಳು ಕೇಳಿಬರುತ್ತಿವೆ.!!

ಗ್ರಾಮದ ನಿವಾಸಿಗಳ ಮಾಹಿತಿಯ ಪ್ರಕಾರ, ಮೇ. 28 ಸಿದ್ದರಾಮಯ್ಯನವರು ಸಿಎಂ.ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತಿದ್ದಂತೆ ಕೆಲ ಯುವಕರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಸಮೀಪ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಪಟಾಕಿಗಳು ಸುತ್ತಮುತ್ತಲಿನ ಮನೆಗಳತ್ತ ಹಾರಿದ ಪರಿಣಾಮ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ ಕಾಂಗ್ರೆಸ್ ಪಕ್ಷದ ಡಿಎಸ್.ಹೂಲಗೇರಿ ಯವರ ಗುಂಪಿನಲ್ಲಿ ಗುರ್ತಿಸಿಕೊಂಡಿದ್ದ ಈಚನಾಳ ಗ್ರಾಮದ ಆನಂದ ಕುಂಬಾರ ಎನ್ನುವಾತ ಮತ್ತು ಆತನ ಸಹಜರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದುಬಂದಿದೆ.news_1780412298_0_169.webpಘಟನೆಗೆ ಸಂಬಂಧಿಸಿದಂತೆ ವಿವಿಧ ಹಿಂದುಳಿದ ವರ್ಗಗಳ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಹಾಗೂ ಒಂದೆ ಪಕ್ಷದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವಕ್ಕೆ ಧಕ್ಕೆ ಉಂಟುಮಾಡುವ ರೀತಿಯ ನಡೆಗಳನ್ನು ಖಂಡಿಸಿವೆ. ಜನಪರ ಆಡಳಿತ ನೀಡಿದ ನಾಯಕರ ರಾಜೀನಾಮೆಯನ್ನು ಸಂಭ್ರಮದ ವಿಷಯವನ್ನಾಗಿ ಮಾಡಿರುವುದು ಸಿದ್ದರಾಮಯ್ಯ ಅವರ ಬೆಂಬಲಿಗರು ಹಾಗೂ ಹಲವು ರಾಜಕೀಯ ಕಾರ್ಯಕರ್ತರು, ಹಾಗೂ ಕುರುಬ ಸಮುದಾಯದವರಿಗೆ ನೋವುಂಟುಮಾಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇ ವೇಳೆ, ಪಕ್ಷದ ನಾಯಕರಾದವರು ಇಂತಹ ಬೆಳವಣಿಗೆಗೆ ಕಾರಣರಾದವರನ್ನು ಪಕ್ಕದಲ್ಲಿಯೇ ಇಟ್ಟಕೊಂಡಿರುವದು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರಕ್ಕೆ ಕಾರಣವಾಗಿದ್ದಲ್ಲದೆ ಮುಂದಿನ ವಿಧಾನಸಭೆ,ಜಿಲ್ಲಾ ,ತಾಲೂಕ ಪಂಚಾಯತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.news_1780412510_0_775.webpಆರೋಪಿತ ವ್ಯಕ್ತಿಗಳ ವಿರುದ್ಧ ಪಕ್ಷದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪೊಲೀಸ್ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಘಟನೆ ಕುರಿತು ಸ್ಪಷ್ಟ ತನಿಖೆ ನಡೆದ ಬಳಿಕವೇ ವಾಸ್ತವಾಂಶ ಹೊರಬೀಳಬೇಕಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಯಾರೀತ ಆನಂದ ಕುಂಬಾರ.?

ಈಚನಾಳ ಗ್ರಾಮದಲ್ಲಿಯೇ ವಾಸವಾಗಿರುವ ಆನಂದ ಕುಂಬಾರ ಸಧ್ಯ ಡಿಎಸ್.ಹೂಲಗೇರಿ ಬಣದ ಕಾಂಗ್ರೇಸ್ ಪಕ್ಷದಲ್ಲಿ ಗುರ್ತಿಸಿಕೊಂಡಿರುವ ಯುವಕ.!

ಆದರೆ ಇದಕ್ಕೂ ಮುಂಚೆ ಬಿಜೆಪಿ,ಜೆಡಿಎಸ್ ಪಕ್ಷದ ನಾಯಕರ ಚುನಾವಣೆಯಲ್ಲಿ ಸುತ್ತಾಡಿಕೊಂಡಿದ್ದಾತ. ಸಧ್ಯ ಕುರುಬ ಸಮುದಾಯ ಸೇರಿ ಹಿಂದುಳಿದ ವರ್ಗದ ಮುಖಂಡರ ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾನೆ.!

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!