Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಮೀಸಲಾತಿ ಅನ್ಯಾಯ ಖಂಡಿಸಿ ಮೇ 27ರಂದು ಬೆಂಗಳೂರು ಚಲೋ 

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ಗಂಗಾವತಿ ಪರಿಶಿಷ್ಟ ಜಾತಿಗಳ ಆಂತರಿಕ ಮೀಸಲಾತಿ ವಿರೋಧಿಸಿ ಹಾಗೂ ಬುದ್ಧ, ಅಂಬೇಡ್ಕರ್, SCSP/TSP ಹೋರಾಟದ ಮೂಲ ಆಶಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ಬಹುಜನ ಪ್ರತಿಭಟನಾ ಸಮಾವೇಶವನ್ನು ಮೇ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಮಾದಿಗ ದಂಡೋರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರು ಬಿ. ಹುಸೇನಪ್ಪ ಸ್ವಾಮಿ ಮಾದಿಗ ತಿಳಿಸಿದರು. 

ನಗರದ ಪತ್ರಿಕಾ ಭವನದಲ್ಲಿ ಅಖಿಲ ಭಾರತ ಮಾದಿಗ ದಂಡೋರ ಸಮಿತಿ ವತಿಯಿಂದ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.news_1779703928_0_736.webpಮೀಸಲಾತಿ ತಿದ್ದುಪಡೆ ಮಾಡುವಲ್ಲಿ ಕಾಂಗ್ರೆಸ್ ಸರಕಾರ ಸಂವಿಧಾನ ಉಲ್ಲಂಘನೆ ಮಾಡಲಾಗಿದೆ. ಸಂವಿಧಾನವನ್ನು ಗಾಳಿಗೆ ತೂರಿ, ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ದಲಿತ ಸಮಾಜ ಬೆಳೆಯಲು ಬಿಳದೆ ಕಾಂಗ್ರೆಸ್ ಪಕ್ಷ ನಮಗೆ ಅನ್ಯಾಯ ಮಾಡುತ್ತಿದೆ. ಅಹಂಕಾರದಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ. ಅದಕ್ಕಾಗಿಯೇ ಮೇ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವನ್ನು ನಡೆಸಲಾಗುವುದು. ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಟ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕಳೆದ ಕೆಲ ವರ್ಷಗಳಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನಡೆಯುತ್ತಿರುವ ಚರ್ಚೆಗಳು ಹಾಗೂ ಸರ್ಕಾರದ ಕ್ರಮಗಳು ಸಮಾಜದಲ್ಲಿ ಅಸಮಾಧಾನ ಮೂಡಿಸಿವೆ. news_1779703928_0_736.webpಸಮಾವೇಶದಲ್ಲಿ ವಿವಿಧ ಸಮಾಜಮುಖಿ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಬುದ್ಧಿಜೀವಿಗಳು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ಒಳಮೀಸಲಾತಿ ನೀತಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಇದರಿಂದ ಪರಿಶಿಷ್ಟ ಜಾತಿಗಳ ಏಕತೆ ಹಾಳಾಗುವ ಸಾಧ್ಯತೆ ಇದೆ. ಅದನ್ನು ವಿರೋಧಿಸಿ, ಮೇ 27ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಭಾಗಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ರೀತಿ ಪಾಠ ಕಲಿಸಬೇಕಾಗಿದೆ ಎಂದು ಹೇಳಿದರು. 

ಅಖಿಲ ಭಾರತ ಮಾದಿಗ ದಂಡೋರ ಸಮಿತಿಯ ತಾಲೂಕು ಅಧ್ಯಕ್ಷ ಕನಕಪ್ಪ ದೊಡ್ಡಮನಿ, ಮುಖಂಡರಾದ ಯಮನೂರಪ್ಪ ಗೋನಾಳ, ಶರಣಪ್ಪ ಕನಕಗಿರಿ, ಯಂಕಪ್ಪ, ಬೋಜಪ್ಪ, ಶಿವಪ್ಪ ಮಾದಿಗ ಹಾಗೂ ಇತರಿದ್ದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!