Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ನಗರದಲ್ಲಿ ರೋಟರಿ ವುಮೆನ್ಸ್ ಕ್ಲಬ್ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಡಿ.ಡಿ. ನ್ಯೂಸ್ : ಗಂಗಾವತಿ

Advertisement

news_1776415027_1_983.webpನಗರದ ಉಪವಿಭಾಗ ಆಸ್ಪತ್ರೆ ಮುಂಭಾಗದಲ್ಲಿ ರೋಟರಿ ವುಮೆನ್ಸ್  ಕ್ಲಬ್ ಆಫ್ ರೈಸ್ ಬಾಲ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷ ಬೇಸಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಿಸುವ ಸೇವಾ ಕಾರ್ಯವು ಗಂಗಾವತಿ ನಗರದಲ್ಲಿ ಸಾವಿರಾರು ಭಕ್ತರಿಗೆ ಮಜ್ಜಿಗೆ ಮತ್ತು ತಂಪು ಪಾನೀಯಗಳನ್ನು ವಿತರಿಸುವ ಸಂಪ್ರದಾಯವನ್ನು ರೋಟರಿ ಕ್ಲಬ್ ಮತ್ತು ರೋಟರಿ ವುಮೆನ್ಸ್ ಕ್ಲಬ್ ಪಾಲಿಸುತ್ತಾ ಬಂದಿದೆ ನಗರದಲ್ಲಿ ಪೊಲೀಸರಿಗೆ ಮತ್ತು ಬಿಸಿಲಿನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಮಜ್ಜಿಗೆ ವಿತರಿಸುವ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ತಿಂಗಳವರೆಗಿನ ಬೇಸಿಗೆ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುವ ಜನರಿಗೆ ಅನುಕೂಲವಾಗುವಂತೆ ಪೊಲೀಸ್ ಠಾಣೆ ಮತ್ತು ಸರ್ಕಾರಿ ಆಸ್ಪತ್ರೆ ಬಸ್ ನಿಲ್ದಾಣಗಳು ಅಥವಾ ಪ್ರಮುಖ ವೃತ್ತಗಳಲ್ಲಿ ಇಂತಹ  ಮಜ್ಜಿಗೆ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ರೋಟರಿ ರೈಸ್ ಕ್ಲಬ್ ಅಧ್ಯಕ್ಷರಾದ ಗೀತಾ ಚೌದ್ರಿ ಹೇಳಿದರು.

ನಂತರ ಮಾತನಾಡಿದ ಎಸ್.ಎಸ್.ಪಿ.ಲೈಪ್ ಮಿಷನ್ ಮ್ಯಾನೇಜ್ಮೆಂಟ್ ನಿರ್ದೇಶಕರಾದ ಸೋಫಿಯಾರಾಣಿ ಇವರು ನಮ್ಮ ರೋಟರಿ ರೈಸ್ ಕ್ಲಬ್ ವತಿಯಿಂದ ಪ್ರತಿವರ್ಷ ಸಮಾಜಕ್ಕೆ ಒಳ್ಳಯದಾಗಬೇಕೆಂದು ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡುವ ಮೂಲಕ ನಮ್ಮ ಕೈಯಲ್ಲಿ ಏ‌ನು ಸಾದ್ಯ ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಬಂದಿದ್ದೇವೆ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಮಾಡಿದ್ದೇವೆ ಇನ್ನೂ ಆ ದೇವರು ನಮ್ಮ ಶಕ್ತಿ ಕೊಟ್ಟರೆ ದೊಡ್ಡ ದೊಡ್ಡ ಪ್ರಮಾಣದಲ್ಲಿ ಸಮಾಜ ಸೇವೆಯನ್ನು ನಮ್ಮ ರೋಟರಿ ರೈಸ್ ಕ್ಲಬ್ ವತಿಯಿಂದ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದರು.                

ಈ ಸಂದರ್ಭದಲ್ಲಿ ರೋಟರಿ ರೈಸ್ ಕ್ಲಬ್ ಕಾರ್ಯದರ್ಶಿ ಬಿ.ಶ್ರೀದೇವಿ, ರೋಟರಿ ಕ್ಲಬ್ ರೈಸ್ ಸದಸ್ಯರಾದ ಲಲಿತಾ ನಾಗರಾಜ,ಶಾಹಿನ್ ಕೌಸರ್,ಗಂಗಾವತಿ ಸಂಚಾರಿ ಪೊಲೀಸ್ ಠಾಣೆ ಎ.ಎಸ್.ಐ ರೇವಪ್ಪ, ಕಲಾವತಿ,ಪೊಲೀಸ್ ಸಿಬ್ಬಂದಿ ಪರಶುರಾಮ, ಮಲ್ಲಪ್ಪ, ವಿಜಯಕುಮಾರ್ ಗದ್ದಿ,ಸೇರಿದಂತೆ ಇತರರು ಇದ್ದರು

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!