Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ಕೆರೆ ಸುಪ್ರೀಂ ಕೋರ್ಟ್ ತೀರ್ಪಿನ ಭಾಗವಾಗಿಲ್ಲ ಸಾಬೀತುಪಡಿಸಲು ಸಿದ್ಧ: ಕಣವಿ

ಕೊಪ್ಪಳ ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ‌ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ನಡೆದಿರುವ 193ನೇ ದಿನದ ಧರಣಿ ವೇದಿಕೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಬಸಾಪುರ ಕೆರೆ ಬಲ್ಡೋಟ ಕಂಪನಿಗೆ ಸೇರಿದೆ ಎಂದು ಎಲ್ಲೂ ಹೇಳಿಲ್ಲವೆಂದು ವಕೀಲ ರಾಜು ಬಾಕಳೆ ಅವರು ಭೂ-ಬಾಧಿತರಾಗಿ 16 ವರ್ಷ ನ್ಯಾಯಾಲಯದಲ್ಲಿ ಹೋರಾಡಿದ ಅನುಭವ ಹಂಚಿಕೊಳ್ಳುತ್ತಾ ಬಸಾಪುರ ಕೆರೆ ಮತ್ತು ಕಾನೂನು ನಡೆ ಸಂವಾದ ವಿಷಯ ಮಂಡನೆ ಮಾಡಿ ಮಾತನಾಡಿದರು. ಸಂವಾದದ ವಿಷಯ ಪ್ರಸ್ತಾಪ ಮಾಡಿ ಕೆರೆಯನ್ನು 30 ವರ್ಷ ಅವಧಿಗೆ ಷರತ್ತು ವಿಧಿಸಿ ಜಿಲ್ಲಾಧಿಕಾರಿ 33 ಲಕ್ಷಕ್ಕೆ ಮಂಜೂರಿ ಮಾಡುವಾಗ ಇದು ಕೆರೆಯಲ್ಲ ಪರಂಪೋಕ ಜಮೀನು ಎನ್ನುವ ಕತೆ ಕಟ್ಟಲು ಪ್ರಯಾಸಪಟ್ಟಿದ್ದು ಮೇಲ್ನೋಟದಲ್ಲೆ ಗೊತ್ತಾಗುತ್ತದೆ. 2003ರಲ್ಲಿ ಬಸಾಪುರ ಕೆರೆಯಲ್ಲಿ ಆಗಿನ ಜಿಲ್ಲಾಧಿಕಾರಿ ನಾಗಲಾಂಬಿಕಾದೇವಿ 3 ಕಂತಿನಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಯೋಜನೆಯಡಿ ಬರಗಾಲ ಕಾಮಗಾರಿ ಮಾಡಿಸಿ ಹೂಳೆತ್ತಿದ್ದಾರೆ ಅಂದೇ ಬರೋಬ್ಬರಿ 10 ಲಕ್ಷ ಅದಕ್ಕೆ‌ ವೆಚ್ಚ ಮಾಡಲಾಗಿದೆ. 2006ರಲ್ಲಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಇದು ಕೆರೆಯಾದ ಕಾರಣದಿಂದ ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಹೇಳುತ್ತಾರೆ. ಹಾಗಾದರೆ 30 ವರ್ಷ ಲೀಸ್ ಕಂ. ಸೇಲ್ ಮಾಡಿ, ದುರ್ಬಲ ಷರತ್ತು ವಿಧಿಸಿ ಕಾಲಾವಧಿ ಮೀರಿದ ಮೇಲೆ ಸರಕಾರದ ಗಮನಕ್ಕೆ ತಂದು ಪರಭಾರೆ ಮಾಡಬಹುದು ಎಂದು ಹೇಳಿದ್ದು ಕೆರೆ ಸಂರಕ್ಷಣೆ ಮಾಡುವ ಎಲ್ಲಾ ಕಾನೂನು ನಿಯಮಾವಳಿಗಳನ್ನು ಉಲ್ಲಂಘಿಸಿದಂತಾಗಿದೆ. ಕೆಳಹಂತದ ಕಂದಾಯ, ಸರ್ವೆ, ಸಹಾಯಕ ಆಯುಕ್ತರು, ಜಿಲ್ಲಾಧಿಕಾರಿಗಳು ಎಲ್ಲರೂ ಸೇರಿ ಕಂಪನಿಗೆ ಕೆರೆ ಮಾರಾಟ ಮಾಡಲು ಅನುವು ಮಾಡಿದ್ದಾರೆ. ಇದರ ಮೇಲೆ ಉನ್ನತ ಮಟ್ಟದ ತನಿಖೆ ನಡೆಸಿ ನಿವೃತ್ತಿಯಾದವರನ್ನೂ ಬಿಡದೆ ತಪ್ಪಿತಸ್ಥರಾಗುವವರ ಮೇಲೆ ಕ್ರಮವಾಗಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ. ಕಣವಿ ಮಾತನಾಡಿ, ನಾನು ಸುಪ್ರೀಂ ಕೋರ್ಟ್ ಆದೇಶ ಓದಿದ್ದೇನೆ. ಅದರಲ್ಲಿ ಬಸಾಪುರ ಕೆರೆಗೆ ಸಂಬಂಧಿಸಿದ ಯಾವುದೇ ಉಲ್ಲೇಖಗಳಿಲ್ಲ. ನಾನು ವಕೀಲನಾಗಿ ಕಾನೂನು ಅಭಿಪ್ರಾಯವನ್ನು ಜಿಲ್ಲಾಧಿಕಾರಿಯವರಿಗೆ ಕೊಡಲು ಸಿದ್ದನಿದ್ದೇನೆ. ರೈತರ ಮತ್ತು ಕೊಪ್ಪಳ ಜನರ ಪರವಾಗಿ ಹೋರಾಟಕ್ಕೆ ವಕೀಲರ ಸಂಘದ ಮೂಲಕ ಬೆಂಬಲಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಕೊಡುತ್ತೇನೆ, ಅಲ್ಲದೇ‌ ಒಂದು ವಾರದಲ್ಲಿ ಇಡೀಯಾಗಿ ಉಚ್ಛ ಮತ್ತು ಸರ್ವೋಚ್ಚ ನ್ಯಾಯಾಲಯಗಳ ಸಾರಾಂಶವನ್ನು ಲಿಖಿತವಾಗಿ ಜಿಲ್ಲಾಡಳಿತಕ್ಕೆ ಕೊಡುವದಾಗಿ ಹೇಳಿದರು.news_1778599296_0_474.webpಹಿರಿಯ ವಕೀಲ ಪೀರಾಹುಸೇನ್ ಹೊಸಳ್ಳಿ ಮಾತನಾಡಿ, ಸುಪ್ರೀಂ ಕೋರ್ಟ್ ಮತ್ತು ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ನಿಯಮಾವಳಿಗಳು ಬಲಿಷ್ಠವಾಗಿವೆ. ಜ. ಮಾರ್ಕಾಂಡೇಯ ಕಟ್ಜು ತೀರ್ಪು ಉಲ್ಲೇಖ ಮಾಡಿದ ಅವರು ಇಂತಹ ಪ್ರಬಲ ಆದೇಶಗಳು ಕೆರೆಕಟ್ಟೆ ರಕ್ಷಣೆಗಾಗಿ ಬಂದಿವೆ. ನೈಸರ್ಗಿಕ ಸಮುದಾಯದ ಸ್ವತ್ತಾದ ಕೆರೆ, ಸರೋವರಗಳನ್ನು ಯಾವುದೇ ಸರ್ಕಾರಕ್ಕೆ ಮಾರುವ ಹಕ್ಕು ಇಲ್ಲ, ಸರ್ವೋಚ್ಚ ನ್ಯಾಯಾಲಯದ ಅನೇಕ ಆದೇಶಗಳು ನಮ್ಮಲ್ಲಿದ್ದು ಅವುಗಳನ್ನು ಕೊಡಲು ಸಿದ್ಧ ಎಂದು ಪ್ರತಿಪಾದಿಸಿದರು.

ಸಂವಾದದಲ್ಲಿ ಸಂಗಪ್ಪ ವಕ್ಕಳದ, ಜಂಟಿ ಕ್ರಿಯಾ ವೇದಿಕೆ ಸಂಚಾಲಕರಾದ ಮಂಜುನಾಥ ಜಿ. ಗೊಂಡಬಾಳ, ಡಾ. ಮಂಜುನಾಥ ಸಜ್ಜನ್, ಸಾವಿತ್ರಿ ಮುಜುಮದಾರ, ಶಿವಾನಂದಯ್ಯ ಬೀಳಗಿಮಠ, ಶರಣು ಶೆಟ್ಟರ್, ಕಾಶಪ್ಪ ಚಲವಾದಿ ಪ್ರಶ್ನೋತ್ತರದಲ್ಲಿ ಪಾಲ್ಗೊಂಡು ಚರ್ಚಿಸಿದರು. ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ. ಗೋನಾಳ, ಪ್ರಕಾಶಕ ಡಿ.ಎಂ.ಬಡಿಗೇರ, ಮಹಾಂತೇಶ ಕೊತಬಾಳ, ಸರೋಜಾ ಬಾಕಳೆ, ಮಾಲಾ ಬಡಿಗೇರ, ಇಂಜಿನೀಯರ್ ಅನುರಾಧಾ, ವಿದ್ಯಾ ನಾಲ್ವಾಡ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಭೀಮಸೇನ ಕಲಕೇರಿ, ಮೂಕಪ್ಪ ಮೇಸ್ತ್ರಿ ಬಸಾಪುರ, ಡಾ. ಬಸವರಾಜ ಪೂಜಾರ, ಶಾಂತಯ್ಯ ಅಂಗಡಿ, ಹನುಮಂತಪ್ಪ ಗೊಂದಿ, ಯಲ್ಲಪ್ಪ ಬಂಡಿ, ಎಂ.ಕೆ.ಸಾಹೇಬ, ವಕೀಲ ಬಿ.ಎಸ್.ವೀರಾಪೂರ, ವಿನಯ ಸಜ್ಜನ್, ಶಂಭುಲಿಂಗಪ್ಪ ಹರಗೇರಿ, ನಾಗಪ್ಪ ಕಿನ್ನಾಳ, ರವಿ ಕಾಂತನವರ, ಸುಭಾನ್ ಸಾಬ್ ನೀರಲಗಿ, ಬಸವರಾಜ ಪೂಜಾರ ಕಾಸನಕಂಡಿ, ಪಂಪಣ್ಣ ಚಿಂತಪಲ್ಲಿ, ನಾಗರಾಜ ಕುಷ್ಟಗಿ, ಮಹಾದೇವಪ್ಪ ಮಾವಿನಮಡು, ನಾಗರಾಜ ಯಲಿಗಾರ, ಗೋಪಾಲ ಕುಂಬಾರ, ವಿಜಯ ಮಹಾಂತೇಶ ಹಟ್ಟಿ, ಶಿವಪ್ಪ ಜಲ್ಲಿ, ಮಲ್ಲಪ್ಪ ಎಸ್.ಎಚ್, ವೈ. ಸತ್ಯನಾರಾಯಣ, ವಿನೋದ, ಶಿವರಾಜ ಚಲವಾದಿ ಪಾಲ್ಗೊಂಡರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!