ಗಂಗಾವತಿ: ಸಮೀಪದ ಬಸಾಪಟ್ಟಣ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಪ್ರತಿ ಹಬ್ಬವನ್ನು ಭಾವೈಕ್ಯದಿಂದ ಆಚರಿಸುತ್ತಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಗಂಗಾವತಿ ಗ್ರಾಮೀಣ ಠಾಣೆ ಸಿಪಿಐ ರಂಗಪ್ಪ ಹೆಚ್.ದೊಡ್ಡಮನಿ ಹೇಳಿದರು.
ಬಸಾಪಟ್ಟಣ ಗ್ರಾಮದಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡದೆ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧೆಯಿಂದ ಆಚರಿಸಬೇಕು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಗೆ ಸಮಾಜದವರು ಸಹಕರಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ರಾಮಯ್ಯ ಗುರುವಿನ,ಸಿದ್ದಯ್ಯ ಗುರುವಿನ, ದಳಪತಿ ಮಹ್ಮದ್ ಸಾಬ , ಗ್ರಾಮದ ಮುಖಂಡರಾದ ಸಣ್ಣಕ್ಕಿ ನೀಲಪ್ಪ, ಕೆ.ಮೈಬುಸಾಬ,ಆಂಜನೇಯ ನಾಯಕ್,ದ್ಯಾಮಣ್ಣ ಅಂಗಡಿ,ಎಸ್.ರಾಮಕೃಷ್ಣ, ಸೇರಿದಂತೆ ಇತರರು ಇದ್ದರು
