Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಕಿಷ್ಕಿಂದ ಪಿಯು ಕಾಲೇಜಿಗೆ ಶೇ.100 ಫಲಿತಾಂಶದ ಸಂಭ್ರಮ – ಡಾ. ಚಂದ್ರಪ್ಪ ಮೆಚ್ಚುಗೆ

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ಗಂಗಾವತಿ ಗಂಗಾವತಿ ನಗರದ ಕೊಪ್ಪಳ ರಸ್ತೆಯಲ್ಲಿರುವ ಕಲ್ಯಾಣ ಕರ್ನಾಟಕ ಟ್ರಸ್ಟ್ ಕಮಿಟಿ ಅಧೀನದ ಕಿಷ್ಕಿಂದ ಪಿಯು ಕಾಲೇಜು ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಂಭ್ರಮಕ್ಕೀಡಾಗಿದೆ.

ಟ್ರಸ್ಟ್ ಅಧ್ಯಕ್ಷರಾದ ಡಾ. ಚಂದ್ರಪ್ಪ, ಮುರಳಿ, ವೀರಭದ್ರಪ್ಪ ಅವರು ಬುಧವಾರ ಕಾಲೇಜಿನ ಅಧ್ಯಕ್ಷರ ಕೊಠಡಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಕಾಲೇಜಿನ ಗೌರವವನ್ನು ಹೆಚ್ಚಿಸಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

ವಿಜ್ಞಾನ ವಿಭಾಗದಲ್ಲಿ ಒಟ್ಟು 163 ವಿದ್ಯಾರ್ಥಿಗಳಲ್ಲಿ 145 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಸಾಧನೆ ಮಾಡಿದ್ದು, 18 ಮಂದಿ ಫಸ್ಟ್ ಕ್ಲಾಸ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳಲ್ಲಿ 27 ಮಂದಿ ಡಿಸ್ಟಿಂಕ್ಷನ್ ಪಡೆದುಕೊಂಡು, ಓರ್ವ ವಿದ್ಯಾರ್ಥಿ ಫಸ್ಟ್ ಕ್ಲಾಸ್‌ನಲ್ಲಿ ಉತ್ತೀರ್ಣರಾಗಿದ್ದಾನೆ.

ಇನ್ನೂ ವಾಣಿಜ್ಯ ವಿಭಾಗದಲ್ಲಿ ಸಿ. ತಂಗಾ ಶೇ.97 ಅಂಕಗಳನ್ನು ಗಳಿಸಿ ಮಿಂಚಿದರೆ, ವಿಜ್ಞಾನ ವಿಭಾಗದಲ್ಲಿ ಸೈಯದ್ ಪರ್ವೇಜ್ ಖಾದ್ರಿ ಶೇ.95 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

ಒಟ್ಟಾರೆ ಶೇ.100 ಫಲಿತಾಂಶದೊಂದಿಗೆ ಕಾಲೇಜು ಮತ್ತೊಮ್ಮೆ ತನ್ನ ಶಿಕ್ಷಣ ಗುಣಮಟ್ಟವನ್ನು ಸಾಬೀತುಪಡಿಸಿದೆ. ಈ ಸಾಧನೆಗೆ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರ ಪರಿಶ್ರಮವೇ ಕಾರಣವಾಗಿದ್ದು, ಅವರ ಶ್ರಮ ಸಾರ್ಥಕವಾಗಿದೆ ಎಂದು ಡಾ. ಚಂದ್ರಪ್ಪ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಕಾಲೇಜು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದಾರೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!