Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

news_1779867735_0_538.webpಯಲಬುರ್ಗಾ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರತರಲು ಇಂತಹ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ ಎಂದು ಜನನಿ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಹಾಗೂ ಹೇಮಾದ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಬೇಸಿಗೆ ಶಿಬಿರ ಸಮರೂಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಶಿಬಿರದಲ್ಲಿ ಪಡೆದ ತರಬೇತಿ ಮಕ್ಕಳ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಮಕ್ಕಳ ಬೇಸಿಗೆ ಶಿಬಿರ ಆಯೋಜನೆಯಲ್ಲಿ ಬಾಲ ಭವನ ಸೊಸೈಟಿ, ಯುನಿಸೆಫ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಮುಖ ಪಾತ್ರ ವಹಿಸಿದೆ.ಶಿಬಿರದ ಯಶಸ್ಸು ಮತ್ತು ಮಕ್ಕಳ ಕಲಿಕೆಯನ್ನು ಪ್ರದರ್ಶಿಸುವ ಪ್ರಮುಖ ಕಾರ್ಯಕ್ರಮವಾಗಿದೆ. ಇದು ಸಾಂಸ್ಕೃತಿಕ ಪ್ರದರ್ಶನಗಳು, ಕಲಾಕೃತಿಗಳ ಪ್ರದರ್ಶನ, ಪ್ರಮಾಣಪತ್ರ ವಿತರಣೆ ಮತ್ತು ಭವಿಷ್ಯದ ಪ್ರೇರಣೆಯ ಮಾತುಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.news_1779867785_0_761.webpಪ್ರಮುಖರಾದ ಶಿವಪ್ಪ ವಾದಿ,ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಅಶೋಕ್ ಮಾಲಿಪಾಟೀಲ್ ಮಾತನಾಡಿ,ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಹೊರತರುವಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರವಹಿಸುತ್ತವೆ.ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಮಕ್ಕಳು ಸಂತೋಷಪಡುವುದರ ಜೊತೆಗೆ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಬಹುದು. ಜನನಿ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಂಸ್ಥೆ ಮಕ್ಕಳ ಶಿಕ್ಷಣಕ್ಕಾಗಿ ಹಲವು ವಿಭಿನ್ನ ಕಾರ್ಯಕ್ರಮವನ್ನು, ತರಬೇತಿ ಹಾಗೂ ಉಚಿತ ಕ್ರೀಡಾ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.ಬೇಸಿಗೆ ರಜೆ ಅವಧಿಯಲ್ಲಿ ಮಕ್ಕಳು ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಕ್ರೀಡಾಸ್ಫೂರ್ತಿ ಬೆಳೆಯುತ್ತದೆ. ನಾಯಕತ್ವ ಗುಣ, ಮಾರ್ಗದರ್ಶನ ಸಾಮರ್ಥ್ಯ ಹಾಗೂ ಶಿಸ್ತು ಬೆಳೆಯಲು ಕ್ರೀಡೆ ಸಹಕಾರಿ’ ಎಂದು ಹೇಳಿದರು. news_1779867850_0_637.webpಕಾರ್ಯಕ್ರಮ ಉದ್ದೇಶಿಸಿ ಪ್ರಾಚಾರ್ಯ ಯಶ್ವಂತ್ ಕಾಂಬ್ಳೆಕರ್ ಹಾಗೂ ನಿವೃತ್ತ ಪ್ರಾಚಾರ್ಯ ಎಂ ಎನ್ ಜನಾದ್ರಿ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಣೇಶ್ ವಲ್ಮಕೊಂಡಿ, ಆಡಳಿತ ಅಧಿಕಾರಿ ಲೋಕೇಶ್ ಲಮಾಣಿ,ಮುಖ್ಯೋಪಾಧ್ಯಾಯ ಅಕ್ಷಯಕುಮಾರ ಪತ್ತಾರ, ಶಿಕ್ಷಕರಾದ ನಾಸೀರ್ ಹುಸೇನ, ಮಹಾಂತೇಶ್ ಮಂಗಳೂರು, ರತ್ನ ಡಿ.ಹೆಚ್,ಗೀತಾ ಜೋಗಿನ,ವಿಜಯಾ ಕುಂಬಾರ,ಅಮೃತ ಹೊಸಳ್ಳಿ ಸೇರಿದಂತೆ ಇತರರು ಇದ್ದರು.news_1779867988_0_129.webp

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!