ಬೆಂಗಳೂರು: ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸಲು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡೆಸಿದ ಯತ್ನ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆಯ ನಡುವೆ ರಾಮಲಿಂಗಾ ರೆಡ್ಡಿಯವರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವ ಸಾಧ್ಯತೆಗಳಿವೆ ಎಂದೆನ್ನನಾಗಿದೆ. ರಾಮಲಿಂಗಾರೆಡ್ಡಿ ರಾಜೀನಾಮೆ ಸಲ್ಲಿಸಿದ ನಂತರ, ಜಯನಗರದ ಖಾಸಗಿ ಹೊಟೇಲ್ನಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ರಾಮಲಿಂಗಾ ರೆಡ್ಡಿ ಅವರ ನಡುವೆ ಒನ್ ಟು ಒನ್ ಮಾತುಕತೆ ನಡೆದಿದ್ದು, ಸತತ 2.30 ಗಂಟೆಗಳ ಕಾಲ ಮನವೊಲಿಸುವ ಪ್ರಯತ್ನ ನಡೆಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇಡೀ ಸಮಯವೂ ಮುಖ್ಯವಾಗಿ ಖಾತೆ ಹಂಚಿಕೆ, ಸಚಿವ ಸ್ಥಾನ, ಮತ್ತು ಪಕ್ಷದ ಒಳಗಿನ ಅಸಮಾಧಾನ ಕುರಿತಂತೆ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿಯವರು, ರಾಜೀನಾಮೆ ವಾಪಸ್ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡದೆ, ‘ಕಮ್ಯುನಿಕೇಶನ್ ಗ್ಯಾಪ್ ಆಗಿದೆ ಅಷ್ಟೇ’ ಎಂದು ಮಾರ್ಮಿಕವಾಗಿ ನುಡಿದರು.
