ಬೇವೂರ ಪ್ರೌಢ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆಯಲ್ಲಿದೆ
ಯಲಬುರ್ಗಾ: ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಹೇಳಿದರು.
ತಾಲೂಕಿನ ಬೇವೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತಿಯ ಆಶ್ರಯದಲ್ಲು ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ, ಶುಕ್ರವಾರ ಮಾತನಾಡಿದರು. ಪರಿಸರ ಪ್ರತಿಯೊಬ್ಬ ಜೀವ ಕೋಶಗಳ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿ ಗಾಳಿ, ನೀರು, ಮರಗಳು,ಕಾಡುಗಳು, ಸಾಗರಗಳು ಪ್ರತಿಯೊಂದು ಬಹಳ ಮುಖ್ಯ.ಈ ಪರಿಸರವು ಯುಗ ಯುಗಗಳವರೆಗೂ ಹೀಗೆ ಉಳಿಯಬೇಕಾಗಿದೆ. ಆದ್ದರಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುವುದು ಬಹಳ ಮುಖ್ಯವಾಗಿದೆ ಹಾಗೂ ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನೀರನ್ನು ವ್ಯರ್ಥ ಮಾಡದೆ ಸಂರಕ್ಷಿಸುವುದು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ವಿಶ್ವದಾದ್ಯಂತ ಸುಮಾರು 143 ದೇಶಗಳಲ್ಲಿ ವಿಶ್ವ ಪರಿಸರ ದಿನ ಆಚರಿಸುತ್ತಾ ಬಂದಿದೆ. ಪರಿಸರ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು ವಿಶ್ವ ಸಂಸ್ಥೆ ಸ್ಥಾಪಿಸಿತು.1947 ರಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ನಿರ್ಧಿಷ್ಟ ಥೀಮ್ ನೊಂದಿಗೆ ಆಚರಿಸುತ್ತಾ ಬಂದಿದೆ ಎಂದು ತಿಳಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ ಗಫಾರ, ಆಡಳಿತಾಧಿಕಾರಿಗಳು, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಮಹಿಳಾ ಸಂಘದ ಅಧ್ಯಕ್ಷರು, ಎಂಬಿಕೆ, ವಿ ಆರ್ ಡಬ್ಲ್ಯೂ, ಗ್ರಂಥಪಾಲಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.
