Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಗೌತಮ ಬುದ್ದ ಏಷಿಯಾದ ಬೆಳಕು: ಕೆ ರಾಘವೇಂದ್ರ ಹಿಟ್ನಾಳ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

news_1777621122_0_491.webpಕೊಪ್ಪಳ ಭಗವಾನ್ ಗೌತಮ ಬುದ್ದ ಅವರು ಇಡೀ ಏಷಿಯಾದ ಬೆಳಕು ಎಂದು ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು  ಗೌತಮ ಬುದ್ದ ವ್ಯಕ್ತಿತ್ವವನ್ನು ಬಣ್ಣಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಮೇ 01ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆದ ಭಗವಾನ್ ಬುದ್ಧ ಜಯಂತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಮ್ಮ ಮನೆಯಲ್ಲಿದ್ದ ಸಿರಿ ಸಂಪತ್ತನ್ನು ತ್ಯಜಿಸಿ ಸರಳ ಬದುಕಿಗೆ ಬಂದ ಬುದ್ದ ಅವರು ಈ ಜಗತ್ತು ಕಂಡ ಮಹಾಮಹೀಮರಾಗಿದ್ದಾರೆ. ಇಂತಹ ಮಹಾತ್ಮನ ಜಯಂತಿಯು ರಾಜ್ಯ ಸರ್ಕಾರದಿಂದ ನಡೆಯುತ್ತಿರುವುದು ವಿಶೇಷ ಎಂದರು. 75 ವರ್ಷಗಳಾದರು ಸಹ ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸುವ ಕೆಲಸ ಮಾಡಬೇಕಿದೆ. ಅಂದಾಗ ಸಮಾನತೆ ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.news_1777620929_0_875.webpಸಮಾರಂಭದಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ ಅವರು ಮಾತನಾಡಿ, ಬುದ್ದ ಪೂರ್ಣಿಮೆಯು ಸಂಭ್ರಮದ ದಿನವಾಗಿದೆ. ಬುದ್ದ, ಬಸವ, ಅಂಬೇಡ್ಕರ ಅವರು ಜಗತ್ತಿಗೆ ಬೆಳಕು ನೀಡಿದ ಮಹಾನ್ ನಾಯಕರು. ಯುದ್ದ ಬೇಡ ಬುದ್ದ ಬೇಕು ಎಂದು ಈಗ ಇಡೀ ಜಗತ್ತೇ ಹೇಳುತ್ತಿದೆ. ಸಾಮರಸ್ಯದ ಬದುಕು ಕಟ್ಟಿಕೊಳ್ಳಲಾಗದಂತಹ ಪರಿಸ್ಥಿತಿ ಇಂದು ಜಗತ್ತಿನಲ್ಲಿ ಮುಂದುವರೆದಿದೆ. ಅಹಿಂಸೆ ಬೇಡ, ನಾವು ಬದುಕಬೇಕು ಮತ್ತು ಇತರರಿಗೂ ಬದುಕಲು ಬಿಡಬೇಕು ಎಂಬ ಮಹತ್ವದ ಸಂದೇಶವನ್ನು ಗೌತಮ ಬುದ್ದ ನೀಡಿದ್ದಾರೆ ಎಂದು ತಿಳಿಸಿದರು.news_1777621020_0_432.webpನಿವೃತ್ತ ಉಪ ಅಧೀಕ್ಷಕರಾದ ಗಿರೀಶ ಕಾಂಬ್ಳೆ ಅವರು ವಿಶೇಷ ಉಪನ್ಯಾಸ ನೀಡಿ, ಬುದ್ದ ಅವರು ಕೇವಲ ಭಾರತದ ಬೆಳಕಲ್ಲ; ಅವರು ಇಡೀ ಜಗತ್ತಿನ ಬೆಳಕು. ಬುದ್ದ ಅಂದರೆ ಅದು ಮಹಾಸಾಗರ ಇದ್ದಂತೆ. ನಮ್ಮ ಮುಂದಿನ ಏಳ್ಗೇಗೆ, ನಮ್ಮ ಮುಂದಿನ ಬಾಳ್ವೆಗೆ ಬುದ್ದ ಬೇಕು. ಬುದ್ದನನ್ನು ಅರ್ಥ ಮಾಡಿಕೊಂಡವರು ಈ ಜಗತ್ತಿನಲ್ಲಿ ನೆಮ್ಮದಿಯಿಂದ ಬದುಕುತ್ತಾರೆ. ಬುದ್ದ ಒಂದು ಜಾತಿ, ಭಾಷೆ, ಪ್ರದೇಶ, ದೇಶಕ್ಕೆ ಸೀಮೀತರಾಗಿಲ್ಲ. ಅವರ ವಿಚಾರ ವಿಶ್ವವ್ಯಾಪಿ ಎಂದರು.

ಬುದ್ದನ ಆಶಯದಂತೆ ಡಾ.ಅಂಬೇಡ್ಕರ್ ಅವರು ಸಂವಿಧಾನ ಬರೆದರು ಎಂದು ತಿಳಿಸಿದರು. ರೋಗಿಯನ್ನು, ಸತ್ತವನನ್ನು ನೋಡಿದ ಗೌತಮ ಬುದ್ದ ಆಸ್ತಿ ಕೇಳಲಿಲ್ಲ; ಸಂಪತ್ತು ಕೇಳಲಿಲ್ಲ. ಈ ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬರಿಗೂ ನೆಮ್ಮದಿಯಿಂದ ಬದುಕುವ ಹಕ್ಕಿದೆ ಎಂದು ತಿಳಿಸಿದವರು ಬುದ್ದ. ಬುದ್ದ ಎಂದರೆ ಶಾಂತಿಯ ದ್ಯೋತಕ. ಆದರೆ ಬುದ್ದನ ವಿಚಾರಗಳು ಬೆಳೆಯಲು ಕೆಲವರು ಬಿಡುತ್ತಿಲ್ಲ ಎಂದರು.

ಸಮಾರಂಭದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ, ಪ್ರಸನ್ನ ವೀರಣ್ಣ ಗಡಾದ್, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ನಗರಸಭೆ ಪೌರಾಯುಕ್ತರಾದ ಮಂಜುನಾಥ ಗುಂಡೂರ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಮುಖಂಡರಾದ ಕೃಷ್ಣ ಇಟ್ಟಂಗಿ, ಮುತ್ತುರಾಜ್ ಕುಷ್ಟಗಿ, ಸಿದ್ರಾಮ ಹೊಸಮನಿ, ನಾಗರಾಜ ಬೆಲ್ಲದ, ರಘು ಬೆಲ್ಲದ, ಜಗದೀಶ ಚಲವಾದಿ, ಹನುಮಂತಪ್ಪ ಬಂಗಾಳಿಗಿಡದ, ಮಹಾವೀರ ಅಳ್ಳಳ್ಳಿ, ಗವಿಸಿದ್ದಪ್ಪ ಬೆಲ್ಲದ ಹಾಗೂ ಇತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಸ್ವಾಗತಿಸಿದರು. ಬಿ ಎನ್ ಹೊರಪೇಟೆ ನಿರೂಪಿಸಿದರು. ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!