Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಸಮುದಾಯ ಭವನದಿಂದ ಬಡವರ ವಿವಾಹಕ್ಕೆ ನೆರವು: ರಾಯರಡ್ಡಿ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಕಡಿಮೆ ವೆಚ್ಚದಲ್ಲಿ ವಿವಾಹ ಕಾರ್ಯಕ್ರಮಗಳನ್ನು ನೆರವೇರಿಸಲು ಸಮುದಾಯ ಭವನಗಳು ಮಹತ್ವದ ಪಾತ್ರವಹಿಸುತ್ತಿವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಚಿಕ್ಕವಂಕಲಕುಂಟ ಗ್ರಾಮದಲ್ಲಿ 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮುಖ್ಯಮಂತ್ರಿಗಳ ವಿವೇಚನಾ ನಿಧಿ ಹಾಗೂ 2024-25ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ನಿರ್ಮಿಸಲಾದ “ಬುದ್ಧ-ಬಸವ-ಅಂಬೇಡ್ಕರ್ ಸಾಂಸ್ಕೃತಿಕ ಭವನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. news_1776855423_0_911.webpಹಿರೇವಂಕಲಕುಂಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಮದುವೆ ಹಾಗೂ ಇತರೆ ಸಮಾರಂಭಗಳಿಗಾಗಿ ಕುಷ್ಟಗಿ, ಕನಕಗಿರಿ, ಕೊಪ್ಪಳಗಳಿಗೆ ತೆರಳಬೇಕಾಗಿದ್ದ ಪರಿಸ್ಥಿತಿ ಇತ್ತು. ಇದೀಗ ಗ್ರಾಮದಲ್ಲೇ ಸಮುದಾಯ ಭವನ ನಿರ್ಮಾಣಗೊಂಡಿರುವುದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಭವನವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು. ಸರ್ಕಾರದಿಂದ ನಿರ್ಮಿಸಲಾದ ಸಮುದಾಯ ಭವನಗಳು ಜನರ ಸಾಮಾಜಿಕ ಹಾಗೂ ಆರ್ಥಿಕ ಅಗತ್ಯಗಳನ್ನು ಪೂರೈಸುವ ಉದ್ದೇಶ ಹೊಂದಿವೆ. ಖಾಸಗಿ ಮಂಟಪಗಳ ಹೆಚ್ಚಿದ ಬಾಡಿಗೆಯನ್ನು ಭರಿಸಲು ಅಸಮರ್ಥವಾಗಿರುವ ಬಡ ಕುಟುಂಬಗಳಿಗೆ ಇವು ಸಹಾಯಕವಾಗಿವೆ ಎಂದು ಹೇಳಿದರು. ಇಂತಹ ಭವನಗಳನ್ನು ಬಡವರಿಗೆ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ನೀಡುವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗುವುದು. ಸಮೂಹ ವಿವಾಹಗಳಿಗೆ ಉತ್ತೇಜನ ನೀಡುವುದರಿಂದ ಅನಗತ್ಯ ವೆಚ್ಚ ಕಡಿಮೆಯಾಗುವುದರ ಜೊತೆಗೆ ಸಮಾಜದಲ್ಲಿ ಸಮಾನತೆ ಬಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಸಮುದಾಯ ಭವನಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿವಿಧ ಭಾಗಗಳ ಕೆರೆಗಳನ್ನು ತುಂಬಿಸುವ ಕಾರ್ಯ ನಡೆಯುತ್ತಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗಿದೆ. ಅಲ್ಲದೇ ವಿವಿಧ ಪ್ರದೇಶಗಳಲ್ಲಿ ಬಸ್ ನಿಲ್ದಾಣಗಳ ನಿರ್ಮಾಣ ಕಾರ್ಯವೂ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಆರು ಜೋಡಿಗಳ ಸಾಮೂಹಿಕ ವಿವಾಹ ನೆರವೇರಿತು. ಜಿಪಂ ಮಾಜಿ ಉಪಾಧ್ಯಕ್ಷ ಯಂಕಣ್ಣ ಯರಾಶಿ ಮಾತನಾಡಿ, ಶಾಸಕ ರಾಯರಡ್ಡಿ ಅವರು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಹಿರಿಯ ಮುಖಂಡ ರಾಘವೇಂದ್ರಚಾರ್ಯ ಜೋಶಿ ಅವರು ಹಿರೇವಂಕಲಕುಂಟ ಭಾಗಕ್ಕೆ ಹೆಚ್ಚಿನ ಅನುದಾನ ಒದಗಿಸಿರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಲೋಕೋಪಯೋಗಿ ಇಲಾಖೆ ಎಇಇ ಮಲ್ಲಿಕಾರ್ಜುನ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಹನುಮಂತಗೌಡ ಚೆಂಡೂರು, ಸಮಾಜಸೇವಕ ಎಸ್.ಆರ್. ನವಲಿಹಿರೇಮಠ, ವೀರನಗೌಡ ಪೋಲಿಸಪಾಟೀಲ, ಚಂದ್ರಶೇಖರಯ್ಯ ಹಿರೇಮಠ, ಅಡಿವೆಪ್ಪ ಭಾವಿಮನಿ, ಮಹೇಶ ಹಳ್ಳಿ, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರಡ್ಡಿ, ಅಪ್ಪಣ್ಣ ಜೋಶಿ, ಸುಧೀರ ಕೊರ್ಲಳ್ಳಿ, ರುದ್ರಪ್ಪ ಮರಕಟ್, ಆದೇಶ ರೊಟ್ಟಿ ಸೇರಿದಂತೆ ಇತರರು ಇದ್ದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!