Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಶಾಲಾ ಅಡುಗೆ ಕೋಣೆ, SWM, FST ಘಟಕ ಪರಿಶೀಲನೆ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

news_1781001393_0_756.webp

ಮುರಡಿ ಗ್ರಾಮ ಪಂಚಾಯತಿ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ: ಜಿಪಂ ಯೋಜನಾ ನಿರ್ದೇಶಕರು ಸಲಹೆnews_1781001435_0_378.webpನರೇಗಾ ಕೂಲಿಕಾರರಿಗೆ ನಿರಂತರ ಕೆಲಸ: ಎಸ್.ಎಂ.ಕಾಂಬಳೆ

ಯಲಬುರ್ಗಾ: ಮಹಾತ್ಮ ಗಾಂಧಿ ನರೇಗಾ ಯೋಜನೆಯಂತೆಯೇ ವಿಬಿಜಿ ರಾಮ್ ಜಿ ಕೂಡ ಅಕುಶಲ ಕೂಲಿಕಾರರಿಗೆ ನಿರಂತರ ಕೆಲಸ ಇರುವುದರಿಂದ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರಾದ ಎಸ್.ಎಂ ಕಾಂಬಳೆ ಅವರು ಭರವಸೆ ನೀಡಿದರು.news_1781001519_0_345.webpಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಕೂಲಿಕಾರರನ್ನುದ್ದೇಶಿಸಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಸರಿಯಾಗಿ ಕೆಲಸ ನಿರ್ವಹಿಸಿ ವೇತನ ಪಡೆಯಬಹುದು. ಕೆಲಸದ ವಿಷಯದಲ್ಲಿ ಯಾವುದೇ ಅಡೆ ತಡೆ ಇರುವುದಿಲ್ಲ ಎಂದು ತಿಳಿಸಿದರು.news_1781001549_0_299.webpಗ್ರಾಮೀಣ ಪ್ರದೇಶದ ಅಕುಶಲಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಿ, ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೊತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು‌ ಎಂದು ಸಲಹೆ ನೀಡಿದರು.news_1781001572_0_582.webpಬಳಿಕ ಮುರಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಅಡುಗೆ ಕೋಣೆ ಕಾಮಗಾರಿ ಪರಿಶೀಲಿಸಿದರು. ನಂತರ ಮುರಡಿಯ ಘನ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಎಫ್ ಎಸ್ ಟಿ ಘಟಕಗಳನ್ನು ಪರಿಶೀಲಿಸಿ ಘಟಕಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಪಿಡಿಒರವರಿಗೆ ಸಲಹೆ ನೀಡಿದರು. ಘಟಕದಲ್ಲಿ ತ್ಯಾಜ್ಯ ವಿಂಗಡಣೆಯಾಗಬೇಕು. ಮುಂದಿನ ದಿನಗಳಲ್ಲಿ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದರು.news_1781001602_0_302.webpಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್, ಜಿಪಂನ ಸ್ವಚ್ಛ ಭಾರತ ಮಿಷನ್ ಯೋಜನೆಯ ಅಧಿಕಾರಿಗಳಾದ ರಾಮಣ್ಣ ಬಂಡಿಹಾಳ, ಶಿವಕುಮಾರ, ಪಿಡಿಒರಾದ ಪುಷ್ಪಲತಾ, ತಾಂತ್ರಿಕ ಸಹಾಯಕರಾದ ವಿಜಯ ಬಳಿಗಾರ, ಕಂಪ್ಯೂಟರ್ ಆಪರೇಟರ್ ರಮೇಶ ಹಳ್ಳಿ, ಸಮುದಾಯ ತಾಂತ್ರಿಕ ಸಹಾಯಕ ಬಸೆಟ್ಟೆಪ್ಪ ಅಂಗಡಿ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!