ಸಿಂಧನೂರು ಮಳೆಗಾಲದಲ್ಲಿ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಕೆಲವು ಅತ್ಯಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ಆರೋಗ್ಯ ರಕ್ಷಣೆಗಾಗಿ ಕಲುಷಿತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಹರಡುವ ಡೆಂಗ್ಯೂ, ಮಲೇರಿಯಾ, ಟೈಪಾಡ್, ಮತ್ತು ಕಾಮಾಲೆ ಕಾಯಿಲೆಗಳ ಬಗ್ಗೆ ಎಚ್ಚರದಿಂದರಬೇಕು ಕುಡಿಯುವ ನೀರನ್ನು ಕಾಯಿಸಿ ಸೋಸಿ ಕುಡಿಯಬೇಕು ವೈಯಕ್ತಿಕ ನೈರ್ಮಲ್ಯ ಮಳೆಯಲ್ಲಿ ನೆನೆಯಬೇಡಿ ಒಂದು ವೇಳೆ ನೆನೆದರೆ ತಕ್ಷಣ ಇದ್ದ ನೀರಿನಲ್ಲಿ ಸ್ನಾನ ಮಾಡಿ, ಮನೆ ಮತ್ತು ಪರಿಸರದ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಿ, ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬಹುದು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಗೀತಾ ಹಿರೇಮಠ ಹೇಳಿದರು.
ಸಿಂಧನೂರು ತಾಲೂಕಿನ ರೌಡಕುಂದ ಆಯುಷ್ಯ ಆರೋಗ್ಯದ ವ್ಯಾಪ್ತಿಗೆ ಬರುವ ಸಾಸಲಮರಿ ಕ್ಯಾಂಪ್ ನಲ್ಲಿ ನಡೆದ ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ ರಾಯಚೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಗುಂದ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಮಾತನಾಡಿದರು.
ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಗರ್ಭಿಣಿ ತಾಯಂದಿರಿಗೆ, ಸಾರ್ವಜನಿಕರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿ, ಪ್ರಯಾಣ ಮತ್ತು ವಿದ್ಯುತ್ ಗುಡುಗು ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬೇಡಿ, ಹಳೆಯ ಕಟ್ಟಡಗಳು ಮತ್ತು ವಿದ್ಯುತ್ ಕಂಬಗಳ ಬಳಿ ಓಡಾಡುವಾಗ ಎಚ್ಚರಿಕೆವಹಿಸಿ, ಆರೋಗ್ಯದಲ್ಲಿ ಏರುಪೇರು ಆದಾಗ ನಿರ್ಲಕ್ಷ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದರು.
ಈ ಸಂದರ್ಭದಲ್ಲಿ: ಸಮುದಾಯ ಆರೋಗ್ಯ ಅಧಿಕಾರಿ ಪ್ರಸನ್ನಕುಮಾರ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಅಂಬಮ್ಮ, ಆರೋಗ್ಯ ನಿರೀಕ್ಷಣ ಅಧಿಕಾರಿ ಶಿವಕುಮಾರ, ಆಶಾ ಕಾರ್ಯಕರ್ತೆ ಜ್ಯೋತಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಗರ್ಭಿಣಿ ತಾಯಂದಿರು, ಸಾರ್ವಜನಿಕರು, ಉಪಸ್ಥಿತರಿದ್ದರು.
