Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಹಗೇದಾಳ ನರೇಗಾ ಕೂಲಿಕಾರರಿಗೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ನೊಂದಣೆ ಅಭಿಯಾನ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಪಿಎಂಎಸ್ ವೈಎಂ ಯೋಜನೆ ಸದುಪಯೋಗ ಪಡೆದು ಪ್ರತಿತಿಂಗಳ 3000 ಪಿಂಚಣಿ ಪಡೆಯಬಹುದು

ಯಲಬುರ್ಗಾ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಎನ್ನುವುದು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಂದು ಸ್ವಯಂಪ್ರೇರಿತ ಮತ್ತು ಕೊಡುಗೆ ಆಧಾರಿತ ಪಿಂಚಣಿ ಯೋಜನೆಯಾಗಿದ್ದು, ಈ ಯೋಜನೆಯಡಿ 60 ವರ್ಷ ವಯಸ್ಸಿನ ನಂತರ ಪ್ರತಿ ತಿಂಗಳು 3,000 ಖಚಿತವಾದ ಪಿಂಚಣಿ ದೊರೆಯುತ್ತದೆ ಎಂದು ತಾಲೂಕು ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ ತಿಳಿಸಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮ ಪಂಚಾಯತಿಯ ಹಗೇದಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡುತ್ತಿರುವ ನಾಲಾ ಹೊಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ರೋಜಗಾರ್ ದಿನಾಚರಣೆ ಹಾಗೂ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರು ಎಂದರೆ ಬೀದಿ ಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಮನೆ ಕೆಲಸದವರು ಹಾಗೂ ನರೇಗಾ ಕೂಲಿಕಾರರು ಸೇರಿದಂತೆ ವಿವಿಧ ರೀತಿಯ ಕಾರ್ಮಿಕರು 18 ರಿಂದ 40 ವರ್ಷಗಳ ಒಳಗಿರಬೇಕು. ಮಾಸಿಕ ಆದಾಯ ₹15,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅರ್ಜಿದಾರರು ಆದಾಯ ತೆರಿಗೆ ಪಾವತಿದಾರರಾಗಿರಬಾರದು ಮತ್ತು EPFO, ESIC ಅಥವಾ NPS ಸದಸ್ಯರಾಗಿರಬಾರದು ಎಂದು ತಿಳಿಸಿದರು.news_1779027784_0_765.webpಯೋಜನೆಯಡಿ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000 ಪಿಂಚಣಿ ಸಿಗುತ್ತದೆ. ಕೂಲಿಕಾರರು ಪ್ರತಿ ತಿಂಗಳು ವಯಸ್ಸಿಗೆ ತಕ್ಕಂತೆ ಎಷ್ಟು ಹಣ ಪಾವತಿಸುತ್ತೀರಿ, ಅಷ್ಟೇ ಮೊತ್ತವನ್ನು ಕೇಂದ್ರ ಸರ್ಕಾರವು ನಿಮ್ಮ ಪಿಂಚಣಿ ಖಾತೆಗೆ ಜಮೆ ಮಾಡುತ್ತದೆ. ಫಲಾನುಭವಿಯ ಮರಣದ ನಂತರ, ಅವರ ಸಂಗಾತಿಗೆ (ಪತಿ ಅಥವಾ ಪತ್ನಿ) ಪಿಂಚಣಿಯ 50% (₹1,500) ಮೊತ್ತವನ್ನು ಕುಟುಂಬ ಪಿಂಚಣಿಯಾಗಿ ನೀಡಲಾಗುತ್ತದೆ. ನಿಮ್ಮ ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ₹55 ರಿಂದ ₹200 ವರೆಗೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೀವು ಉಚಿತ ಸಹಾಯವಾಣಿ ಸಂಖ್ಯೆ 1800 2676 888 ಗೆ ಕರೆ ಮಾಡಬಹುದು. Pmjby ಹಾಗೂ pmsby ಯೋಜನೆಯ ವಿಮಾವನ್ನು ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮುದಾಯ ತಾಂತ್ರಿಕ ಸಹಾಯಕರಾದ ಶರೀಪ್ ಸುಂಕದ ಮಾತನಾಡಿ, ಎರಡುಬಾರಿ ಎನ್ಎಂಎಂಎಸ್ ಹಾಜರಾತಿ ಕಡ್ಡಾಯ, ಮೆಜರ್ ಮೆಂಟ್ ಗೆ ತಕ್ಕಂತೆ ಕೂಲಿ ಕೆಲಸದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಕಾಯಕ ಮಿತ್ರರಾದ ಶರಣಮ್ಮ, ಕಾಯಕ ಬಂಧುಗಳು, 176 ಕೂಲಿಕಾರರು ಹಾಜರಿದ್ದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!