Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ರಾಯರೆಡ್ಡಿಗೆ ಕಗ್ಗಂಟಾದ ರಾಮಲಿಂಗಾ ರೆಡ್ಡಿ.?

ಡಿ.ಡಿ.ನ್ಯೂಸ್ ಕೊಪ್ಪಳ

Advertisement

ರೆಡ್ಡಿ ಕೋಟಾದಡಿ ರಾಯರೆಡ್ಚಿಗೆ ಸಚಿವ ಸ್ಥಾನ ಕೈ ತಪ್ಪುವ ಸಾಧ್ಯತೆ.?

ಕೊಪ್ಪಳ: ಮೊದಲ ಪಟ್ಟಿಯಲ್ಲಿ ಜಿಲ್ಲೆಗೆ ದೊರೆಯದ ಸಚಿವ ಸ್ಥಾ‌ನ, ಎರಡನೇ ಪಟ್ಟಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಯವರ ಹೆಸರು ಬಲವಾಗಿ ಕೇಳಿ ಬರುತ್ತಿವೆ. 

ಹಿರಿತನ ಹಾಗೂ ಅನುಭವದ ಆಧಾರದ ಮೇಲೆ‌ ಬಸವರಾಜ ರಾಯರೆಡ್ಡಿ ಅವರು ತಮಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಆಸೆಯಿಂದ ಅತೀ ಉತ್ಸುಕದಲ್ಲಿದ್ದಾರೆ. ಆದರೆ, ತಂಗಡಗಿ ಮತ್ತು ಹಿಟ್ನಾಳ ರ ಹೊಂದಾಣಿಕೆಗೆ ಹೋಲಿಕೆ ಮಾಡಿದರೇ ರಾಯರೆಡ್ಡಿಗೆ ಮತ್ತಷ್ಟು ಬಿಕ್ಕಟ್ಟು ಕಾಣತೊಡಗಿದೆ. 

ರೆಡ್ಡಿ ಸಮಾಜದ ಪೈಪೋಟಿ: ಗದಗ ಕ್ಷೇತ್ರದ ನಿರ್ಗಮಿತ ಸಚಿವ ಹೆಚ್.ಕೆ.ಪಾಟೀಲ್, ನವಲಗುಂದ ಶಾಸಕ ಎನ್. ಎಚ್. ಕೋನರೆಡ್ಡಿ, ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ರೆಡ್ಡಿ ಸಮಾಜ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂದು ತೀವ್ರ ಪೈಪೋಟಿ ನಡೆಸಿದ್ದಾರೆ ಎನ್ನಲಾಗಿದೆ. 

ರಾಮಲಿಂಗಾ ರೆಡ್ಡಿ ಪ್ರಭಾವ ಬೀರುವುದೇ: ಬೆಂಗಳೂರಿನ ಬಿಟಿಎಂ ಲೇ ಔಟ್ ನ ಶಾಸಕ ರಾಮಲಿಂಗಾ ರೆಡ್ಡಿ ಅವರು ಮೊದಲ ಹಂತದಲ್ಲಿಯೇ ಸಿಎಂ ಡಿಕೆಶಿ ಜೊತೆಗೆ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದರು. ಖಾತೆಗಾಗಿ ಕ್ಯಾತೆ ತೆಗೆದು ಸಚಿವರಾಗಿ 24 ಗಂಟೆಯಲ್ಲಿಯೇ ರಾಜೀನಾಮೆ ನೀಡಿದ್ದರು. ಸಿಎಂ ಡಿಕೆಶಿ ಯವರ ಆಪ್ತ ಸ್ನೇಹಿತರಾದ ರಾಮಲಿಂಗಾ ರೆಡ್ಡಿ ಯವರನ್ನು ಮನವೊಲಿಸಿ, ರಾಜೀನಾಮೆ ಹಿಂಪಡೆಯುವಂತೆ ಮಾಡುತ್ತಿದ್ದಾರೆ. ದಕ್ಷಿಣ ಭಾಗದವರಾದ ರಾಮಲಿಂಗಾ ರೆಡ್ಡಿ ಅವರು ಉತ್ತರ‌ ಕರ್ನಾಟಕಕ್ಕೆ ಏನು ಪ್ರಭಾರ ಬಿರದಿದ್ದರೂ ಸಹ ರೆಡ್ಡಿ ಕೋಟಾದಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದಕ್ಕೆ ಮತ್ತಷ್ಟು ರಾಯರೆಡ್ಡಿಗೆ ಕಗ್ಗಂಟಾಗಿ ಮಾರ್ಪಡಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಶುರುವಾಗಿವೆ. 

ಪಟ್ಟು: ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಬಿ.ಪಾಟೀಲ್ ರಿಗೆ ರೆಡ್ಡಿ ಕೋಟಾದಡಿ ಉತ್ತರ ಕರ್ನಾಟಕ ಕ್ಕೆ ಸಚಿವ ಸ್ಥಾನ ನೀಡಲಾಗಿದೆ. ಇದೇ‌ ಕಾರಣವನ್ನು ಮುಂದಿಟ್ಟುಕೊಂಡು  ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಿ, ಸಾಮಾಜಿಕ ನ್ಯಾಯ ಒದಗಿಸಬೇಕೆಂದರೇ ನಿರ್ಗಮಿತ ಸಚಿವ ಶಿವರಾಜ ತಂಗಡಗಿ ಸಹ ತಮಗೆ ಸಚಿವ‌ ಸ್ಥಾನ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಇನ್ನೂ ಕೊಪ್ಪಳದಲ್ಲಿ ಹ್ಯಾಟ್ರಿಕ್ ಗೆಲವು ಸಾಧಿಸಿದ ಕುರುಬ ಸಮಾಜದ ಕೆ.ರಾಘವೇಂದ್ರ ಹಿಟ್ನಾಳ ಅವರು ಉತ್ತರ ಕರ್ನಾಟಕ್ಕೆ ಕುರುಬರಿಗೆ ಸಚಿವ ಸ್ಥಾನ ನೀಡುವುದಾದರೇ ಅದನ್ನು ತಮಗೆ ನೀಡಬೇಕೆಂದು ಎಲ್ಲಿಲ್ಲದ ಕಸರತ್ತು ನಡೆಸಿ, ಪಟ್ಟು ಹಿಡಿದಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!