ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಶುಭಪ್ರಿಯಾ ಯಲ್ಲಪ್ಪ ಲಮಾಣಿ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
625 ಅಂಕಗಳಿಗೆ 620 ಅಂಕಗಳನ್ನು ಗಳಿಸಿರುವ ಅವರು ಶೇ. 99.20 ರಷ್ಟು ಫಲಿತಾಂಶ ಪಡೆದು ಮೇರು ಸಾಧನೆ ತೋರಿದ್ದಾರೆ. ಇವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಪ್ರಶಂಸೆ ವ್ಯಕ್ತವಾಗಿದೆ. ಫೋಟೊ 23ವೈಎಲ್ಬಿ-5: ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಶುಭಪ್ರಿಯಾ ಯಲ್ಲಪ್ಪ ಲಮಾಣಿ ಭಾವಚಿತ್ರ.
