Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಕೊಪ್ಪಳದಲ್ಲಿ ಮೇ.೨ರಂದು ಎಸ್ಐಆರ್ ಜಾಗೃತಿ ಕಾರ್ಯಕ್ರಮ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ಕೊಪ್ಪಳ : ಮೇ ಸಾಹಿತ್ಯ ಮೇಳ ಕೊಪ್ಪಳ ಬಳಗ ಹಾಗೂ ಮಾನವ ಬಂದುತ್ವ ವೇದಿಕೆ, ದಲಿತ ಸಂಘಟನೆಗಳು ಅಲ್ಪಸಂಖ್ಯಾತರ ಸಂಘಟನೆಗಳು, ವಿವಿಧ ಪ್ರಗತಿಪರ.ಜನಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಮೇ ೨ ರಂದು ಸಂಜೆ ೩:೩೦ ಕ್ಕೆ ಸಾಹಿತ್ಯ ಭವನದಲ್ಲಿ ಎಸ್ಐಆರ್ ವಿರೋಧಿಸಿ ಎಸ್ಐಆರ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಮುಖಂಡ ಟಿ. ರತ್ನಾಕರ್ ಹೇಳಿದರು. 

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ಚಿಂತಕ ಶಿವಸುಂದರ್ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಲೇಖಕರಾದ ಕುಂ ವೀರಭದ್ರಪ್ಪ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದು.ವಿಶೇಷ ಮತದಾರರ ಪರಿಷ್ಕರಣೆ ಹೆಸರಿನಲ್ಲಿ ಮತದಾರರನ್ನು ಹೊರಗಿಡುವ ಕೆಲಸ ನಡೆಯುತ್ತಿದೆ ಇದರ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಪಶ್ಚಿಮ ಬಂಗಾಳದಲ್ಲಿ ನಡೆದಂತಹ ಎಸ್ಐಆರ್ ಕರ್ನಾಟಕದಲ್ಲಿಯು ಬರಬಹುದು. ಹೀಗಾಗಿ ಎಸ್ ಐ ಆರ್ ಪ್ರಕ್ರಿಯೆ ವಿರೋಧಿಸಿ ಜನಾಂದೋಲನವನ್ನು ರೂಪಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.ಮತ ಪಟ್ಟಿಯ ಮೂಲಕ ಪೌರತ್ವವನ್ನು ನಿರಾಕರಿಸುವಂತಹ ಕೆಲಸ ನಡೆಯುತ್ತಿದೆ ಅದನ್ನು ನಾವು ವಿರೋಧಿಸುತ್ತೇವೆ.ಈ ಹಿಂದೆ ಸರಳವಾಗಿ ಪರಿಷ್ಕರಣೆ ನಡೆಯುತ್ತಿತ್ತು.ಈಗ ನಡೆಯುತ್ತಿರುವ ಪರಿಷ್ಕರಣೆಯಿಂದ ದಲಿತರು ಅಲ್ಪಸಂಖ್ಯಾತರು ಆದಿವಾಸಿಗಳು ಈ ಹೊಸ ಮತದಾನದ ಹಕ್ಕಿನಿಂದ ವಂಚಿತರಾಗುತ್ತಾರೆ ಹೀಗಾಗಿ ಇದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

news_1777561330_0_957.webpಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ದಲಿತ ಮುಖಂಡ ಶುಕ್ರಾಜ್ ತಾಳಕೇರಿ ಚುನಾವಣೆಯ ಸಂದರ್ಭದಲ್ಲಿ ಪರಿಷ್ಕರಣೆ ಮಾಡುವುದು ಸಹಜ ಪ್ರಕ್ರಿಯೆ ಆದರೆ ಈಗ ವಿಶೇಷ ಪರಿಷ್ಕರಣೆ ಎನ್ನುವ ನೆಪದಲ್ಲಿ ಪೌರತ್ವದ ಪ್ರಶ್ನೆಯನ್ನು ಇಟ್ಟುಕೊಂಡು ಅವರು ಈಗ ಪರಿಷ್ಕರಣೆ ಮಾಡುತ್ತಿದ್ದಾರೆ. ನುಸುಳುಕೊರರು ಜಾಸ್ತಿಯಾಗಿದ್ದಾರೆ ಎನ್ನುತ್ತಿದ್ದಾರೆ.ಆಗಿದ್ದಾರೆ ಇದು ಯಾರ ವೈಫಲ್ಯ ಎಂದು ಶುಕ್ರಾಜ್ ತಾಳಕೇರಿ ಪ್ರಶ್ನೆ ಮಾಡಿದರು. ಸಂವಿಧಾನದಲ್ಲಿ ಪೌರತ್ವದ ಬಗ್ಗೆ ಸಾಕಷ್ಟು ಕಾನೂನುಗಳಿವೆ ಪೌರತ್ವವನ್ನು ಕೇಳುವುದಕ್ಕೆ, ನಿರ್ಧರಿಸುವುದಕ್ಕೆ ಚುನಾವಣಾ ಆಯೋಗಕ್ಕೆ ಯಾವ ಅಧಿಕಾರವಿದೆ ? 

ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಅವರ ವಿರೋಧಿ ಕಾನೂನುಗಳನ್ನು ಸರಕಾರ ತರುತ್ತಿದೆ. ಅದರ ಭಾಗವೇ ಎಸ್ಐಆರ್ ಇದನ್ನೂ ವಿರೋಧಿಸಿ ಜನಜಾಗೃತಿ ಮೂಡಿಸುವಂತಹ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. ಎಸ್ಐಆರ್ ವಿರುದ್ಧ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಹೇಳಿದರು. 

ಸಂವಿಧಾನಾತ್ಮಕವಾಗಿ ಪ್ರತಿ 10 ವರ್ಷಗಳಿಗೊಮ್ಮೆ ನಡೆಯುವ ಪರಿಷ್ಕರಣೆಯನ್ನು ನಾವು ಒಪ್ಪಿಕೊಳ್ಳುತ್ತೇವೆ. ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸುವುದು ಹಾಗೂ ತೀರಿಕೊಂಡವರ. ವಲಸೆ ಹೋದವರ ಹೆಸರನ್ನು ತೆಗೆದು ಹಾಕುವ ಪ್ರಕ್ರಿಯೆ ಸಾಮಾನ್ಯವಾಗಿತ್ತು.ಆದರೆ ವಿಶೇಷ ಪರಿಷ್ಕರಣೆಯ ಹೆಸರಿನಲ್ಲಿ ಪೌರತ್ವವನ್ನು ಕಸಿಯುವಂತಹ ಕೆಲಸ ನಡೆಯುತ್ತಿದೆ ಇದನ್ನು ನಾವು ವಿರೋಧಿಸುತ್ತೇವೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ(ಡಬ್ಲ್ಯೂ.ಪಿ.ಐ)ದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ನಗರಸಭೆ ಮಾಜಿ ಸದಸ್ಯೆ ಶ್ರೀಮತಿ ಸಬಿಹಾ ಎ.ಪಟೇಲ್ ಹೇಳಿದರು.

ಈಗ ನಡೆದಿರುವ ಪ್ರಕ್ರಿಯೆ ಸಂವಿಧಾನಾತ್ಮಕವಲ್ಲ ಇದರಿಂದಾಗಿ ಮಹಿಳೆಯರು ಸಹ ಇದಕ್ಕೆ ಬಲಿಯಾಗುತ್ತಿದ್ದಾರೆ. ಎನ್ ಆರ್ ಸಿ ಹಾಗೂ ಸಿಎಎ ಹುನ್ನಾರವನ್ನು ಇಟ್ಟುಕೊಂಡು ಸರ್ಕಾರ ಜಾರಿಗೆ ತರುತ್ತಿದೆ. ಅಲ್ಪಸಂಖ್ಯಾತರನ್ನು ಮಹಿಳೆಯರನ್ನು ದಲಿತರನ್ನು ಮತದಾನದಿಂದ ವಂಚಿತಗೊಳಿಸಬೇಕು ಎನ್ನುವ ಉದ್ದೇಶ ಹೊಂದಿದೆ ಆದ್ದರಿಂದ ಇದನ್ನು ನಾವು ವಿರೋಧಿಸುತ್ತಿದ್ದೇವೆ, ಇದರ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಕಾರ್ಯಕ್ರಮ ನಡೆಯುತ್ತಿದ್ದು ಇದರಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ವಿನಂತಿಸಿಕೊಂಡರು.

ದಲಿತರು,ಮುಸ್ಲಿಮರು, ದುಡಿಯುವ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ನಿಟ್ಟಿನಲ್ಲಿ ಎಸ್ಐಆರ್ ಮಾಡಲಾಗುತ್ತಿದೆ ದುಡಿಯುವ ವರ್ಗವನ್ನು ಕೇವಲ ದುಡಿಮೆಗೆ ಹಚ್ಚುವ ನಿಟ್ಟಿನಲ್ಲಿ ಎಸ್ಆರ್ ಜಾರಿ ಮಾಡಲಾಗುತ್ತಿದೆ. ಈ ಹಿಂದೆ ಪ್ರತಿ ವರ್ಷ ಎಸ್ ಆರ್ ಅನ್ನು ಮಾಡಲಾಗುತ್ತಿತ್ತು. ಆದರೆ ಈಗ ಸ್ಪೆಷಲ್ ಎಸ್ಐ ಮಾಡಲಾಗುತ್ತಿದೆ ಏನು ಇದರ ವಿಶೇಷತೆ ಎನ್ನುವುದು ಎಲ್ಲರಿಗೂ ಅರ್ಥವಾಗುತ್ತದೆ ದುಡಿಯುವ ವರ್ಗದಲ್ಲಿ ಯಾವುದೇ ದಾಖಲಾತಿಗಳು ಸಿಗೋದಿಲ್ಲ. ಇವರನ್ನು ಸರಳವಾಗಿ ಮತದಾರ ಪಟ್ಟಿಯಿಂದ ಬಿಟ್ಟುಬಿಡುವುದು ಎನ್ನುವ ನಿಟ್ಟಿನಲ್ಲಿ ಎಸ್ಐ ಆರ್ ಮಾಡಲಾಗುತ್ತದೆ ಇದನ್ನು ನಾವು ವಿರೋಧಿಸುತ್ತೇವೆ ಎಂದು ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ್ ಹೇಳಿದರು. 

ಪತ್ರಿಕಾಗೋಷ್ಠಿಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ. ಗಫಾರ್,ಮಾನವ ಬಂಧುತ್ವ ವೇದಿಕೆಯ ವಿಭಾಗಿಯ ಸಂಚಾಲಕ ಭೀಮಣ್ಣ ಹವಳೆ. ಆಮ್ ಆದ್ಮಿ ಪಾರ್ಟಿಯ ಶರಣು ಶೆಟ್ಟರ್.ಬಹುತ್ವ ಬಳಗದ ರಾಜಾಭಕ್ಷಿ ಎಚ್.ವಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ(ಡಬ್ಲ್ಯೂ.ಪಿ.ಐ) ಜಿಲ್ಲಾಧ್ಯಕ್ಷ ಆದಿಲ್ ಪಟೇಲ್, ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ (ಐ.ಎಫ್.ಟಿ.ಯು) ಸಂಚಾಲಕ ಚಾಂದ್ ಪಾಷಾ ಗಂಗಾವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!